ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್; ಶಾಸಕ ಸ್ಥಾನಕ್ಕೆ ಸದ್ಯಕ್ಕಿಲ್ಲ ಕುತ್ತು.
ಕಲ್ಯಾಣ ಕರ್ನಾಟಕ ವಾರ್ತೆ
ಗಂಗಾವತಿ, ಜೂ 11: ಅವಿಭಜಿತ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ, ಇದೀಗ ಗಂಗಾವತಿ ಬಿಜೆಪಿ ಶಾಸಕರಾಗಿದ್ದ ಗಾಲಿ ಜನಾರ್ದನ ರೆಡ್ಡಿ ಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಶಿಕ್ಷೆಗೆ ಗುರಿಯಾಗಿದ್ದರು, ಇದೀಗ ತೆಲಂಗಾಣ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ತೀರ್ಪು ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನ ಉಳಿಸಿಕೊಳ್ಳಲು ಸಹಾಯಕವಾಗಿದ್ದು, ರಾಜಕೀಯ ಭವಿಷ್ಯಕ್ಕೆ ಜನಾರ್ದನ ರೆಡ್ಡಿ ಅವರಿಗೆ ಮತ್ತೊಂದು ಅವಕಾಶ ಸಿಕ್ಕಿದಂತಾಗಿದ್ದು, ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿರುವ ಜಾಮೀನು ಉಸಿರು ನೀಡಿದಂತಾಗಿದೆ.
ಅಕ್ರಮ ಗಣಿಗಾರಿಕೆ ಹಾಗೂ ಗಡಿ ಒತ್ತುವರಿ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿ ಅವರು ಶಿಕ್ಷೆಗೆ ಗುರಿಯಾಗಿದ್ದರು. ಇದೀಗ ತೆಲಂಗಾಣ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಜನಾರ್ಧನ ರೆಡ್ಡಿ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದ್ದು, ಅವರ ಶಾಸಕರ ಸ್ಥಾನ ಸದ್ಯಕ್ಕೆ ಉಳಿಯುವ ಸಾಧ್ಯತೆಯಿದೆ.
ಮೇ 30ರಂದು ಹೈದರಾಬಾದ್ನ ನಾಮಪಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಜನಾರ್ದನ ರೆಡ್ಡಿ ಸೇರಿದಂತೆ 6 ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿತ್ತು. ಈ ತೀರ್ಪು 2011ರಲ್ಲಿ ನಡೆದ ಓಬಳಾಪುರಂ ಮೈನಿಂಗ್ ಕಂಪನಿ (OMC) ಮೂಲಕ ಗಡಿ ಮೀರಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗಿತ್ತು. ಒಟ್ಟು 850 ಕೋಟಿ ರೂ. ಮೌಲ್ಯದ ಗಣಿ ಸಂಪತ್ತು ಲೂಟಿ ಆರೋಪದಡಿ, ಜನಾರ್ದನ ರೆಡ್ಡಿ 2011ರ ಸೆಪ್ಟೆಂಬರ್ 5ರಂದು ಸಿಬಿಐ ವಶಕ್ಕೆ ಸೇರುವ ಮೂಲಕ 3 ವರ್ಷ 9 ತಿಂಗಳು ಜೈಲುವಾಸ ಅನುಭವಿಸಿದ್ದರು.
ಜನಾರ್ದನ ರೆಡ್ಡಿ ಅವರು ಈ ಹಿಂದೆಯೂ ಜೈಲು ಶಿಕ್ಷೆ ಅನುಭವಿಸಿದ್ದರು. ಮೇ 30 ರಂದು ಸಿಬಿಐ ಕೋರ್ಟ್ನ ಆದೇಶದ ವಿರುದ್ಧ ಜನಾರ್ದನ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ ಬಳಿಕ, ತೆಲಂಗಾಣ ಹೈಕೋರ್ಟ್ ಇದೀಗ ಸಿಬಿಐ ಕೋರ್ಟ್ ತೀರ್ಪಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಜನಾರ್ದನ ರೆಡ್ಡಿ ಅವರಿಗೆ ರಾಜಕೀಯ ಭವಿಷ್ಯಕ್ಕೆ ಉಸಿರಾಟ ನೀಡಿದ್ದು, ಶಾಸಕರ ಸ್ಥಾನ ಉಳಿಸಿಕೊಳ್ಳುವಲ್ಲಿ ಸಹಾಯಕವಾಗಿದೆ.